Home Local News ಮೈಸೂರು ನಗರದಲ್ಲಿ ಹೆಚ್ಚಿನ ಸಸಿ ನಡೆಸಲು ಸಚಿವ ಈಶ್ವರ ಖಂಡ್ರೆ ಸೂಚನೆ

ಮೈಸೂರು ನಗರದಲ್ಲಿ ಹೆಚ್ಚಿನ ಸಸಿ ನಡೆಸಲು ಸಚಿವ ಈಶ್ವರ ಖಂಡ್ರೆ ಸೂಚನೆ

0
ಮೈಸೂರು ನಗರದಲ್ಲಿ ಹೆಚ್ಚಿನ ಸಸಿ ನಡೆಸಲು ಸಚಿವ ಈಶ್ವರ ಖಂಡ್ರೆ ಸೂಚನೆ

ಮೈಸೂರು ನಗರದಲ್ಲಿ ಹೆಚ್ಚಿನ ಸಸಿ ನಡೆಸಲು ಸಚಿವ ಈಶ್ವರ ಖಂಡ್ರೆ ಸೂಚನೆ ಮೈಸೂರು, ಫೆ.20: ಮುಂಬರುವ ಮಳೆಗಾಲದಲ್ಲಿ ಮೈಸೂರು ನಗರ ಮತ್ತು ಜಿಲ್ಲೆಯ ಪಟ್ಟಣ, ನಗರ ಪ್ರದೇಶಗಳ ರಸ್ತೆಯ ಬದಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಟ್ಟು ಹಸಿರು ಹೊದಿಕೆ ಹೆಚ್ಚಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಮೈಸೂರಿನಲ್ಲಿಂದು ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಯ ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ವೃಕ್ಷ ಸಂರಕ್ಷಣೆ ಮತ್ತು ವೃಕ್ಷ ಸಂವರ್ಧನೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು. ಸಭೆಯಲ್ಲಿ ಸಿಸಿಎಫ್ ಮಾಲತಿ ಪ್ರಿಯಾ, ಹುಲಿ ಯೋಜನೆಯ ನಿರ್ದೇಶಕ ರಮೇಶ್ ಕುಮಾರ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಶ್ರೀಪತಿ, ಸೋನಾಲ್, ಪ್ರಭಾಕರನ್, ಸೀಮಾ ಮತ್ತಿತರರು ಪಾಲ್ಗೊಂಡಿದ್ದರು

LEAVE A REPLY

Please enter your comment!
Please enter your name here

error: Content is protected !!