ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘಟನೆಗಳ ಮುಖಂಡರು ಮತ್ತು ಕೃಷಿ ಸಂಸ್ಥೆಗಳ ಪ್ರತಿನಿಧಿಗಳ ಜೊತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 2026-27ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ ಚರ್ಚಿಸಿದರು. ಸಚಿವರಾದ ಚಲುವರಾಯಸ್ವಾಮಿ, ವೆಂಕಟೇಶ್, ನೀತಿ ಆಯೋಗದ ಉಪಾಧ್ಯಕ್ಷರಾದ ಬಿ.ಆರ್.ಪಾಟೀಲ್, ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತು ಆರ್ಥಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು