ಬಾಗಲಕೋಟೆ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗುವಂತೆ ಮಾಡುವ ನಿಟ್ಟಿನಲ್ಲಿ ನವನಗರದ ಬಸ್ ನಿಲ್ದಾಣಕ್ಕೆ ಆಗಮಿಸುವ ಬಸ್ಗಳನ್ನು ಏರಿ ಪ್ರಯಾಣಿಕರಿಗೆ ಕರ ಪತ್ರ ಹಂಚುವ ಮೂಲಕ ಮತದಾನ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಆದ ಜಿ. ಪಂ ಸಿಇಓ ಶಶಿಧರ ಕುರೇರ ಮುಂದಾದರು. ಬಾಗಲಕೋಟ ಜಿಲ್ಲಾ ಸ್ವೀಪ್ ಸಮಿತಿಯು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಮತದಾನದ ಗುರಿ ಹೊಂದಲಾಗಿದೆ.





