ರಾಜ್ಯ ಸರ್ಕಾರದ ವೈಫಲ್ಯದಿಂದಾಗಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದ್ದು, ಮಜಾವಾದೀ ಸಿದ್ದರಾಮಯ. ಮಜಾ ಮಾಡಿಕೊಂಡು ಖುಷಿಯಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇಡೀ ಆರ್ಥಿಕ ವ್ಯವಸ್ಥೆಯೇ ಕುಸಿದು ಹೋಗಿದೆ ಇನ್ನಾದರೂ ಸಿದ್ದರಾಮಯ್ಯ ಅವರು ನಿದ್ದೆಯಿಂದ ಎದ್ದು ಸ್ವಲ್ಪ ರಾಜ್ಯದ ಕಡೆ ಗಮನ ಹರಿಸಬೇಕು ಎಂದು ಆರ್ ಅಶೋಕ್ ಕಿಡಿಕಾರಿದ್ದಾರೆ.





